ಬೈಕಗೆ ಬಸ್ ಡಿಕ್ಕಿ. ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ

ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ತೊರವಿ ಹಕ್ಕಲ್ನ ಎಸ್ಎಸ್ಕೆ ಕಾಲೇಜು ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಕೌಲಪೇಟೆ ಶಿರೂರ ಚಾಳದ ಮಹಮ್ಮದ್ ಇಸಾಕ್ ಮುಜಾಹಿದ್ (45) ಪ್ರಾಣ ಕಳೆದುಕೊಂಡಿದ್ದಾರೆ.
ಬಸ್ ಶಿಶುನಾಳದಿಂದ ಹೊಸೂರು ನಿಲ್ದಾಣಕ್ಕೆ ಹೋಗುತ್ತಿತ್ತು, ಈ ವೇಳೆ ತೊರವಿ ಹಕ್ಕಲದ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಮುಂಬದಿಯಲ್ಲಿ ಹೋಗುತ್ತಿದ್ದ ಬೈಕ್’ಗೆ ಗುದ್ದಿದ್ದಾನೆ. ಪರಿಣಾಮ ಬೈಕ್ ಸವಾರನ ತಲೆಗೆ ಪೆಟ್ಟು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸದ್ಯ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ಪ್ರಾರಂಭಿಸಿದ್ದಾರೆ..