ಖಾಕಿ ಕರ್ತವ್ಯದ ಹಿಂದೆ ಇದೆ ಕರುಣಾಜನಕ ಕಹಾನಿ: ತಾಯಿ ಅಗಲಿಕೆ ನಡುವೆಯೂ ಕರ್ತವ್ಯ ಪ್ರಜ್ಞೆ ಮೆರೆದ ಪಿಐ ರವಿಚಂದ್ರಗೆ ಅಭಿನಂದೆನಗಳ ಮಹಾಪೂರ…

ಸಿನಿಮಿಯ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಠಾಣೆ ಇನ್ಸ್ ಪೆಕ್ಟರ್ ರವಿಚಂದ್ರ ಬಡಫಕೀರಪ್ಪನವರ್ ಯಶಸ್ವಿಯಾಗಿದ್ದಾರೆ.

ಒಂದೇ ವಾರದಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳು ಅವಳಿ ನಗರದಲ್ಲಿ ನಡೆದಿದ್ದವು. ಆಗ ಉಪನಗರ ಠಾಣೆಯಲ್ಲೂ ಕೂಡ ಕಳ್ಳತನವಾಗಿತ್ತು. ಈ ಸಂದರ್ಭದಲ್ಲಿ ಇನ್ಸ್ ಪೆಕ್ಟರ್ ರವಿಚಂದ್ರ ಅವರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು. ಆದ್ರೆ ತಾಯಿ ಅಗಲಿಕೆ ನಡುವೆಯೇ ಮೂರು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾದ ರವಿಚಂದ್ರ ಅವರು ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿತನ ಬಗ್ಗೆ ಮಾಹಿತಿ ಕಲೆಹಾಕಿ ಹಾಕಿದ ಅವರು, ಬಳ್ಳಾರಿ ಮೂಲದ ಗಣೇಶ್ ಕಾಲೋನಿಯ 26 ವರ್ಷದ ಶ್ರೀಕಾಂತ ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತ ನಗರದ ಮಿಷನ್ ಕಂಪೌಂಡ ಹತ್ತಿರ ಮನಿಯೊಂದರಲ್ಲಿ 3,20,000/- ಕಿಮ್ಮತ್ತಿನ 71 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,00,000/- ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ.

ಇದಲ್ಲದೇ ಮೂರು ಪ್ರಕರಣಗಳಲ್ಲಿ ಭಾಗಿ ಆಗಿದ್ದು ಒಟ್ಟು 6,95,000/- ರೂ ಕಿಮ್ಮತ್ತಿನ 165 ಗ್ರಾಂ ತೂಕದ ಬಂಗಾರದ ಆಭರಣಗಳು ಹಾಗೂ 1,000/- ರೂ ಕಿಮ್ಮತ್ತಿನ 20 ಗ್ರಾಂ ತೂಕದ ಬೆಳ್ಳಿ ಆಭರಣ ಮತ್ತು 30,000/- ನಗದು ಹಣವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರಪಡಿಸಿ ಜೈಲಿಗೆ ಅಟ್ಟಿದ್ದು, ರವಿಚಂದ್ರ ಅವರ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಬಹುಮಾನ ಘೋಷಿಸಿದ್ದಾರೆ.
